ತುಂಗಭದ್ರಾ ಅಣೆಕಟ್ಟು (Tungabhadra Dam) ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬಹುಪಯೋಗಿ ಜಲಾಶಯವಾಗಿದೆ. ಇದು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಜಂಟಿ ಯೋಜನೆಯಾಗಿದ್ದು, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಕೃಷಿ ಕ್ಷೇತ್ರದ ಜೀವನಾಡಿಯಾಗಿದೆ.
ಈ ಅಣೆಕಟ್ಟಿನ ನಿರ್ಮಾಣ ಕಾಮಗಾರಿ 1949 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಮುಕ್ತಾಯಗೊಂಡಿತು. ಅಣೆಕಟ್ಟು 105.78 TMC ಒಟ್ಟು ಸಾಮರ್ಥ್ಯ ಹೊಂದಿದ್ದು, 33 ಕ್ರೆಸ್ಟ್ ಗೇಟ್ಗಳನ್ನು ಹೊಂದಿದೆ. ಈ ಯೋಜನೆಯಿಂದ ಸುಮಾರು 12 ಲಕ್ಷ ಎಕರೆಗಿಂತಲೂ ಹೆಚ್ಚು ಕೃಷಿ ಭೂಮಿಗೆ ನೀರಾವರಿ ಒದಗಿಸಲಾಗುತ್ತದೆ.